ಕಬಕ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಸ್ಥಳೀಯ ಪ್ರತಿಭೆಗಳಿಗೆ ಮತ್ತು ಸಾಧಕರಿಗೆ ಅವಕಾಶ

ಪುತ್ತೂರು : ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ ಸಾಧಕರನ್ನು ಸನ್ಮಾನಿಸಲು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನ ಗುರುತಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಭಾಧ್ಯಕ್ಷತೆ ವಹಿಸಿದ ಪುತ್ತೂರು ಕಸಾಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ತಿಳಿಸಿದರು.

Leave a comment