ಕ ಸಾ ಪ-ಪುತ್ತೂರು ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ- ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ:ಶ್ರೀ. ಬಿ. ವೆಂಕಟರಮಣ ಬೋರ್ಕರ್.

ಕ ಸಾ ಪ ಪುತ್ತೂರು ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ ಪುತ್ತೂರು,ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ 13, ಸಮುದಾಯ ಭವನ ನಿಡ್ಪಳ್ಳಿಯಲ್ಲಿ ದಿನಾಂಕ :24-2-2024 ರಂದು ಸಭಾ ಕಾರ್ಯಕ್ರಮ ಉದ್ಘಾಟಿಸಿ “ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ …

Read more

ಕಸಾಪ ಪುತ್ತೂರು, ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -13

ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2024 ಸರಣಿ ಕಾರ್ಯಕ್ರಮ – 13 . ಇದೇ ದಿನಾಂಕ: 24-02-2024ನೇ ಶನಿವಾರ ಬೆಳಗ್ಗೆ 10ಕ್ಕೆ ಸಮುದಾಯ ಭವನ ನಿಡ್ಪಳ್ಳಿ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರ ದ …

Read more

ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿ 

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮವು ದಿನಾಂಕ 25.02.2024 ಆದಿತ್ಯವಾರ ದಂದು ಬೆಳಗ್ಗೆ 9.30 ಕ್ಕೆ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ ಸಾ ಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು …

Read more

ಪುತ್ತೂರು ತಾಲೂಕು ಕಸಾಪದಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಗೆ ಮನವಿ ಪತ್ರ

ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಸನ ಮಂಟಪ ಒಂದನ್ನು ನಿರ್ಮಿಸಿ ಅವುಗಳನ್ನು ಸಂರಕ್ಷಣೆ ಮಾಡುವ ಕುರಿತು ವಿನಂತಿ ಪತ್ರವನ್ನು ದೇವಳದ ಆಡಳಿತ ಅಧಿಕಾರಿಯಾದ ಶ್ರೀ ನವೀನ್ ಬಂಡಾರಿ ಅವರಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ …

Read more

ಜಯಪ್ರಕಾಶ್ ಪುತ್ತೂರು ಅವರ ಕೃತಿ ”ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ” ಲೋಕಾರ್ಪಣೆ

ಶ್ರೀ ಜಯಪ್ರಕಾಶ್ ಪುತ್ತೂರು ಅವರು ಮೂಲತಃ ದರ್ಬೆ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ. ಇವರು ಭಾರತದ ರಾಷ್ಟ್ರಪತಿಗಳಾದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪಿ.ಆರ್. ಓ ಆಗಿ ಸೇವೆ ಸಲ್ಲಿಸಿದ್ದು, ಮೂವರು ಕೇಂದ್ರ ರಕ್ಷಣಾ ಸಚಿವರ ಸಮನ್ವಯ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ವಿನ್ಯಾಸ ಹಾಗೂ ಅಭಿವೃದ್ಧಿ ಕೇಂದ್ರದ ಪ್ರಧಾನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಡಿ ಆರ್ ಡಿ ಓ ಸಂಸ್ಥೆಯ ಪ್ರಾದೇಶಿಕ ಪಿ.ಆರ್.ಓ ಆಗಿ ಸೇವೆಯನ್ನು ಸಲ್ಲಿಸಿರುವ …

Read more

ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಅಕ್ಟೋಬರ್ ನಲ್ಲಿ ನಡೆದ ‘ಕವನ ರಚನಾ ಕಮ್ಮಟ’

ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘ ಮತ್ತು ಐಕ್ಯೂಎಸಿ ಜಂಟಿಯಾಗಿ ಕಾಲೇಜಿನ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ‘ಕವನ ರಚನಾ ಕಮ್ಮಟ’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಸುದಾನ ವಸತಿ ಶಾಲೆಯ ಸಹಾಯಕ ಶಿಕ್ಷಕರಾಗಿದ್ದರು. ಕಾವ್ಯವು ಸುಲಭವಾಗಿ ಗ್ರಹಿಸಬಹುದಾದ ಮಾಧ್ಯಮವಾಗಿದ್ದು, ಜನರನ್ನು ಸೆಳೆಯುವ ಶಕ್ತಿ ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಅವರು ಕಾವ್ಯ ರಚಿಸುವ ಪ್ರಕ್ರಿಯೆಯಲ್ಲಿ ಶಿಸ್ತು, ಏಕಾಗ್ರತೆ ಮತ್ತು ತಾಳ್ಮೆಯ ಮಹತ್ವವನ್ನು ಎತ್ತಿ ತೋರಿಸಿದರು ಮತ್ತು ಕಾವ್ಯವನ್ನು ರಚಿಸುವುದು …

Read more

ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಕನ್ನಡದಲ್ಲಿ ಮುದ್ರಿಸುವಂತೆ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಮನವಿ

ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಇನ್ನು ಕನ್ನಡದಲ್ಲಿ ಮುದ್ರಿಸುವಂತೆ ಮೈಸೂರಿನಲ್ಲಿ ಇಂದು ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ರಿಂದ ಮನವಿ ಸಲ್ಲಿಸಲಾಯಿತು. ರೋಟರಿ ಸಂಸ್ಥೆಗಳ ಆಮಂತ್ರಣವನ್ನು ಇಂಗ್ಲಿಷ್ ಭಾಷೆಯ ಜೊತೆಯಲ್ಲಿ ಕನ್ನಡ ಭಾಷೆಯಲ್ಲಿಯೂ ಮುದ್ರಿಸುವಂತೆ ದಿನಾಂಕ 21.01.2024 ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ಅವರಿಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ …

Read more

ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದಿನಾಂಕ 13-01-2024 ರಂದು ನಡೆಯಿತು. ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಕನ್ನಡ, ಮಲಯಾಳಂ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರವಾದದ್ದು. ಎಳ್ಳಷ್ಟು ಕೋಪವಿಲ್ಲದ, ಸಾಧು ಸ್ವಭಾವವನ್ನು ಅಳವಡಿಸಿಕೊಂಡ ಮಹಾನ್ …

Read more

ತಾಯಿ

ಬಾನಿಗೇನು
ಅಳತೆ
ಅವಳೇ
ಬಾನಾಗಿರುವಾಗ I

ಪ್ರಮೀತ್ ರಾಜ್ ಕಟ್ಟತ್ತಾರು

ಮತ್ತು

ಸುಧಾರಿಸಿಕೊಂಡೆನೆಂದನುಮತ್ತಿನಲ್ಲಿಕಣ್ಣು ಮಿಟುಕಿಸಿ — ಪ್ರಮೀತ್ ರಾಜ್ ಕಟ್ಟತ್ತಾರು