ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  – 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರಧಾನ

ಪುತ್ತೂರು ತಾಲೂಕಿನಿಂದ  ಹೆಚ್ಚಿನ ಸಂಖ್ಯೆಯಲ್ಲಿ ಐ.ಎ.ಎಸ್ ಅಧಿಕಾರಿಗಳಾಗಬೇಕು –  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: 2023-2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ  ಜೂ. 15ರಂದು ತೆಂಕಿಲ ನರೇಂದ್ರ …

Read more

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ

2023 – 2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ವಿದ್ಯಾರ್ಥಿಗಳು ಹಾಗೂ 86 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ‘ ಪುರಸ್ಕಾರ ಸಮಾರಂಭವು 15-06-2024 ರ ಶನಿವಾರ ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ …

Read more

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸೇವಕಿ ಕು. ಸೌಜನ್ಯ. ಬಿ.ಎಂ ರವರಿಗೆ ಕನ್ನಡ ಎಂ. ಎ. ಪ್ರಥಮ ರಾಂಕ್

ಕುಮಾರಿ ಸೌಜನ್ಯ ಬಿ.ಎಂ ರವರು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿಯಾಗಿದ್ದು ಕನ್ನಡ ಎಂ. ಎ. ಯಲ್ಲಿ ಪ್ರಥಮ ರಾಂಕ್ ಜಿಲ್ಲೆಗೆ ತಂದು ಅಪೂರ್ವ ಸಾಧನೆಯನ್ನು ಮಾಡಿದ ಹೆಗ್ಗಳಿಕೆ . 2023-24ನೇ ಶೈಕ್ಷಣಿಕ ಸಾಲಿನಲ್ಲಿ ಈ ವಿಶೇಷ ಸಾಧನೆ ಮಾಡಿದ ಹೆಮ್ಮೆಯ ಸೌಜನ್ಯ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಶ್ರೀ ಬಾಬು ಎಂ ಮತ್ತು ಶ್ರೀಮತಿ ಸುಂದರಿ ಬಿ ಎಂ ಇವರ ಪ್ರೀತಿಯ ಪುತ್ರಿ. ಪಠ್ಯದ ಜೊತೆಗೆ ಸಾಹಿತ್ಯ ಮತ್ತು ಪತ್ರಿಕೋದ್ಯಮ …

Read more

ದ ಕ ಜಿಲ್ಲಾ ಕ.ಸಾ.ಪ ದಿಂದ ‘ಶಾಸನ ಶೋಧನ ಅಧ್ಯಯನ ಸಂರಕ್ಷಣಾ ‘ಯೋಜನೆ-3

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ  800 ವರ್ಷ ಹಿಂದಿನ ವಿಗ್ರಹಗಳು ಪತ್ತೆ ಹಾಗೂ 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆಯ  ಕುದ್ಮಾರ್ ಗ್ರಾಮದ ಬರೆಪ್ಪಾಡಿ ಎಂಬಲ್ಲಿ  ಶ್ರೀ ಪಂಚಲಿಂಗೇಶ್ವರ – ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು  ಸ್ವಚ್ಛಗೊಳಿಸುವ ಸಂದರ್ಭದಲ್ಲಿ  ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ  ಸುಮಾರು 9 ಲೋಹದ ವಿಗ್ರಹಗಳು ಪತ್ತೆಯಾಗಿದೆ. ಜೊತೆಗೆ ದೇವಸ್ಥಾನದ ಒಳ ಆವರಣದದಲ್ಲಿ ಸುಮಾರು …

Read more

ಪುತ್ತೂರಿನ ಅನುರಾಗ ವಠಾರದಲ್ಲಿ ಶ್ರೀ ಜನಾರ್ದನದುರ್ಗ ಅವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಮತ್ತು ಕವಿಗೋಷ್ಠಿ

ದಕ್ಷಿಣ ಕನ್ನಡ ಜಿಲ್ಲಾ ಕ ಸಾ ಪ ಪುತ್ತೂರು ತಾಲೂಕು ಘಟಕದ ವತಿಯಿಂದ ದಿನಾಂಕ 27.5.2024 ರಂದು ಸೋಮವಾರ ಪುತ್ತೂರಿನ ಅನುರಾಗ ವಠಾರದಲ್ಲಿ ಶ್ರೀ ಜನಾರ್ದನದುರ್ಗ ಅವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಮತ್ತು ಕವಿಗೋಷ್ಠಿ. ಪ್ರಸ್ತುತ  ಪುತ್ತೂರು, ಹಾರಾಡಿ ಯ   ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಉದಯೋನ್ಮುಖ ಯುವ  ಸಾಹಿತಿ ಶ್ರೀ ಜನಾರ್ಧನ ದುರ್ಗ  ಇವರು ವೃತ್ತಿಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾದರೂ, ಪ್ರವೃತ್ತಿಯಲ್ಲಿ  ಕನ್ನಡ ಭಾಷಾ ಕವಿಗಳು, ಅಪ್ಪಟ …

Read more

ಕ ಸಾ ಪ-ಪುತ್ತೂರು ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ- ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ:ಶ್ರೀ. ಬಿ. ವೆಂಕಟರಮಣ ಬೋರ್ಕರ್.

ಕ ಸಾ ಪ ಪುತ್ತೂರು ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ ಪುತ್ತೂರು,ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ 13, ಸಮುದಾಯ ಭವನ ನಿಡ್ಪಳ್ಳಿಯಲ್ಲಿ ದಿನಾಂಕ :24-2-2024 ರಂದು ಸಭಾ ಕಾರ್ಯಕ್ರಮ ಉದ್ಘಾಟಿಸಿ “ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ …

Read more

ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿ 

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮವು ದಿನಾಂಕ 25.02.2024 ಆದಿತ್ಯವಾರ ದಂದು ಬೆಳಗ್ಗೆ 9.30 ಕ್ಕೆ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ ಸಾ ಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು …

Read more

ಪುತ್ತೂರು ತಾಲೂಕು ಕಸಾಪದಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಗೆ ಮನವಿ ಪತ್ರ

ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಸನ ಮಂಟಪ ಒಂದನ್ನು ನಿರ್ಮಿಸಿ ಅವುಗಳನ್ನು ಸಂರಕ್ಷಣೆ ಮಾಡುವ ಕುರಿತು ವಿನಂತಿ ಪತ್ರವನ್ನು ದೇವಳದ ಆಡಳಿತ ಅಧಿಕಾರಿಯಾದ ಶ್ರೀ ನವೀನ್ ಬಂಡಾರಿ ಅವರಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ …

Read more

ಜಯಪ್ರಕಾಶ್ ಪುತ್ತೂರು ಅವರ ಕೃತಿ ”ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ” ಲೋಕಾರ್ಪಣೆ

ಶ್ರೀ ಜಯಪ್ರಕಾಶ್ ಪುತ್ತೂರು ಅವರು ಮೂಲತಃ ದರ್ಬೆ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ. ಇವರು ಭಾರತದ ರಾಷ್ಟ್ರಪತಿಗಳಾದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪಿ.ಆರ್. ಓ ಆಗಿ ಸೇವೆ ಸಲ್ಲಿಸಿದ್ದು, ಮೂವರು ಕೇಂದ್ರ ರಕ್ಷಣಾ ಸಚಿವರ ಸಮನ್ವಯ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ವಿನ್ಯಾಸ ಹಾಗೂ ಅಭಿವೃದ್ಧಿ ಕೇಂದ್ರದ ಪ್ರಧಾನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಡಿ ಆರ್ ಡಿ ಓ ಸಂಸ್ಥೆಯ ಪ್ರಾದೇಶಿಕ ಪಿ.ಆರ್.ಓ ಆಗಿ ಸೇವೆಯನ್ನು ಸಲ್ಲಿಸಿರುವ …

Read more

ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಅಕ್ಟೋಬರ್ ನಲ್ಲಿ ನಡೆದ ‘ಕವನ ರಚನಾ ಕಮ್ಮಟ’

ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘ ಮತ್ತು ಐಕ್ಯೂಎಸಿ ಜಂಟಿಯಾಗಿ ಕಾಲೇಜಿನ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ‘ಕವನ ರಚನಾ ಕಮ್ಮಟ’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಸುದಾನ ವಸತಿ ಶಾಲೆಯ ಸಹಾಯಕ ಶಿಕ್ಷಕರಾಗಿದ್ದರು. ಕಾವ್ಯವು ಸುಲಭವಾಗಿ ಗ್ರಹಿಸಬಹುದಾದ ಮಾಧ್ಯಮವಾಗಿದ್ದು, ಜನರನ್ನು ಸೆಳೆಯುವ ಶಕ್ತಿ ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಅವರು ಕಾವ್ಯ ರಚಿಸುವ ಪ್ರಕ್ರಿಯೆಯಲ್ಲಿ ಶಿಸ್ತು, ಏಕಾಗ್ರತೆ ಮತ್ತು ತಾಳ್ಮೆಯ ಮಹತ್ವವನ್ನು ಎತ್ತಿ ತೋರಿಸಿದರು ಮತ್ತು ಕಾವ್ಯವನ್ನು ರಚಿಸುವುದು …

Read more